ಇಳಕಲ್ : ತಹಸೀಲ್ದಾರ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಇಂದು ಉತ್ಸಾಹಭರಿತವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ತಹಸೀಲ್ದಾರ ಅವರು ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ನಂತರ ಅವರು ಕನ್ನಡ ಭಾಷೆಯ ಮಹತ್ವದ ಕುರಿತು ಮಾತನಾಡಿ, "ಕನ್ನಡ ನಮ್ಮ ಆತ್ಮದ ಗುರುತು, ಅದರ ರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯ" ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಮಹಾದೇವ ಕಂಬಾಗಿ , ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ್ ಭಾಗವಹಿಸಿ, ಕನ್ನಡ ಭಾಷೆಯ ಗೌರವ ಮತ್ತು ಭಾಷಾಭಿಮಾನ ಕುರಿತಂತೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ ಈಶ್ವರ ಗಡ್ಡಿ, ಕನ್ನಡಪರ ಹೋರಾಟಗಾರ ಮಹಾಂತೇಶ ವಕ್ಕಲಕುಂಟಿ, ಪತ್ರಕರ್ತ ಉದಯಕುಮಾರ ವದ್ದಿ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ನಾಯಕರು ಹಾಗೂ ತಹಸೀಲ್ದಾರ ಕಚೇರಿಯ ಸಿಬ್ಬಂದಿ ಹಾಜರಿದ್ದರು.


